1ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
2ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ,
3ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ.
4ದೇಶದಲ್ಲಿ ಮಳೆಯಿಲ್ಲದೆ ಭೂಮಿಯು ಬಿರುಕುಬಿಟ್ಟಿರುವುದರಿಂದ ರೈತರು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
5ಇದಲ್ಲದೆ ಹೆಣ್ಣು ಜಿಂಕೆಯು ಕಾಡಿನಲ್ಲಿ ಈದು, ಹುಲ್ಲಿಲ್ಲದ ಕಾರಣ ತನ್ನ ಮರಿಯನ್ನು ಬಿಟ್ಟುಬಿಡುತ್ತದೆ.
6ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
7ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ,
8ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ,
9ಏಕೆ ಸ್ತಬ್ಧನಂತೆಯೂ14:9 ಸ್ತಬ್ಧನಂತೆಯೂ ಅಥವಾ ಗಲಿಬಿಲಿಗೊಂಡವನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ?
10ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ.
11ಮತ್ತು ಯೆಹೋವನು ನನಗೆ, “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆ ಮಾಡಬೇಡ.
12ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು.
13ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
14ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
15ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
16ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
17ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
18ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
19ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?
20ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ,
21ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ.
22ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ?